ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಮೆಟ್ರಿಕ್ ಟನ್ಗೆ 100 ರೂ. ಹೆಚ್ಚುವರಿ ಪಾವತಿ

Published on

spot_img
spot_img

ಹೊಸ ವರ್ಷಕ್ಕೆ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರ ಆದೇಶಿಸಿದೆ. ಜೊತೆಗೆ ಎಫ್‌ಆರ್‌ಪಿ ದರ ಹೊರತುಪಡಿಸಿ ಪ್ರತಿ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ತಿಳಿಸಿದೆ.

ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಂದಾಯವಾಗಲಿದೆ.

ಇದಕ್ಕೂ ಮುನ್ನ ರಾಜ್ಯ ಸರ್ಕಾರ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ 50 ರೂ.ಗಳಂತೆ ಒಟ್ಟು 204 ಕೋಟಿ ರೂಪಾಯಿ ಪಾವತಿಸಲು ಆದೇಶಿಸಿತ್ತು. ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್‌ಆರ್‌ಪಿ ದರ ಹೊರತುಪಡಿಸಿ ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಆದೇಶಿಸಲಾಗಿದೆ.

ಕೇಂದ್ರ ಸರ್ಕಾರ 17 – 08- 2022 ರಂದು 2022-23ನೇ ಸಾಲಿನ ಸಕ್ಕರೆ ಹಂಗಾಮಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು (ಎಫ್‌ಆರ್​ಪಿ) ನಿಗದಿಗೊಳಿಸಿದ್ದು, ಶೇ.10.25 ರಷ್ಟು ಸಕ್ಕರೆ ಇಳುವರಿಗೆ ಪ್ರತಿ ಮೆಟ್ರಿಕ್​ ಟನ್ ಕಬ್ಬಿಗೆ ರೂ. 3,050 ದರ ನಿಗದಿಗೊಳಿಸಿದೆ.

ರಾಜ್ಯ ಸರ್ಕಾರ ಈವರೆಗೆ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ಆದಾಯ ಹಂಚಿಕೆ ಮಾಡುವಾಗ ಸಕ್ಕರೆ, ಬಗ್ಯಾಸ್, ಮೊಲ್ಯಾಸಿಸ್ ಮತ್ತು ಪ್ರೆಸ್‌ ಮಡ್‌ಗಳಿಂದ ಬರುವ ಆದಾಯವನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಸಕ್ಕರೆ ಉದ್ಯಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಈ ವರ್ಷದಲ್ಲಿ ಉಪ ಉತ್ಪನ್ನವಾದ ಎಥನಾಲ್‌ ಅನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಅದರಂತೆ ಪ್ರಥಮ ಕಂತಿನಲ್ಲಿ ಎಫ್.ಆರ್.ಪಿ ಜೊತೆಗೆ ಪ್ರತಿ ಮೆಟ್ರಿಕ್​ ಟನ್ ಒಂದಕ್ಕೆ 50 ರೂ. ಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಎಥೆನಾಲ್ ಹೊಂದಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!