ಅಪಘಾತಕ್ಕೀಡಾದ ಮೃತದೇಹವನ್ನು ಕಾಲುವೆಗೆ ಎಸೆದ ಮೂವರು ಪೊಲೀಸರು ಅಮಾನತು!

Published on

spot_img
spot_img

ವಿವೇಕವಾರ್ತೆ : ಫಕುಲಿ ಔಟ್‌ಪೋಸ್ಟ್ ಪ್ರದೇಶದ ಧೋಧಿ ಕಾಲುವೆ ಸೇತುವೆಯ ಬಳಿ ಅಪಘಾತಕ್ಕೀಡಾದ ವ್ಯಕ್ತಿಯ ಅವಶೇಷಗಳನ್ನು ಕಾಲುವೆಗೆ ಎಸೆಯುವಾಗ ಕ್ಯಾಮರಾದಲ್ಲಿ ಸೆರೆಯಾದ ಮೂವರು ಪೊಲೀಸರನ್ನು ಅಮಾನತುಗೊಳಿಸಿದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ವರದಿಯಾಗಿದೆ.

ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮೂವರು ಪೊಲೀಸರನ್ನು ಬಂಧಿಸುವಲ್ಲಿ ಬಿಹಾರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಜಾಫರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಕಚೇರಿಯ ಹೇಳಿಕೆಯ ಪ್ರಕಾರ, “ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗಿದೆ ಮತ್ತು ಅದು ನಿಜವೆಂದು ಸ್ಪಷ್ಟವಾಗಿದೆ. ಇದು ದುರದೃಷ್ಟಕರ ಘಟನೆ ಮತ್ತು ಅಲ್ಲಿದ್ದ ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಲು ವಿಫಲರಾಗಿದ್ದಾರೆ. ಇವರೊಟ್ಟಿಗೆ ಭಾಗಿಯಾಗಿದ್ದ ಚಾಲಕ ಕಾನ್ಸ್‌ಟೇಬಲ್‌ನನ್ನು ಅಮಾಗೊಳಿಸಲಾಗಿದೆ.

ಇಬ್ಬರು ಗೃಹರಕ್ಷಕ ದಳದ ಜವಾನರ ಗುತ್ತಿಗೆಯನ್ನು ರದ್ದುಗೊಳಿಸಲಾಗಿದ್ದು, ರಕ್ಷಿಸಬಹುದಾದ ದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಲಿಪಶುವಿನ ಗುರುತನ್ನು ಇಲ್ಲಿಯವರೆಗೂ ಖಚಿತಪಡಿಸಲು ಸಾಧ್ಯವಾಗಿಲ್ಲ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!